ಮರಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತು
ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ
ತನು ಗುಣಾದಿಗಳ ಸುಡಲಾಯಿತು
ಇದು ಕಾರಣ ನಿಮ್ಮ ಮಹಾನುಭಾವಿಗಳ ಅನುಭಾವವ ತೋರಿ
ಎನ್ನೊಡಲನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ
ಮರಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತು
ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ
ತನು ಗುಣಾದಿಗಳ ಸುಡಲಾಯಿತು
ಇದು ಕಾರಣ ನಿಮ್ಮ ಮಹಾನುಭಾವಿಗಳ ಅನುಭಾವವ ತೋರಿ
ಎನ್ನೊಡಲನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ